ಮಧ್ಯಪ್ರದೇಶದಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆಗೆ ಶರಣು

Update: 2017-07-03 07:14 GMT

ಹೊಸದಿಲ್ಲಿ, ಜು.3: ಸಾಲಬಾಧೆಯಿಂದ ಕಂಗೆಟ್ಟಿದ್ದ ರೈತನೋರ್ವ ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆಗೈದ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಖುರೈ ಎಂಬಲ್ಲಿ ಸಂಭವಿಸಿದೆ.

ಜಿಲ್ಲೆಯ ನಿವಾಸಿ ಪ್ರೇಮ್ ಲಾಲ್ ಅಹಿರ್ವಾರ್ (24) ಭೂಮಾಲಕನೋರ್ವನಿಂದ 2.5 ಲಕ್ಷ ರೂ. ಸಾಲ ಪಡೆದುಕೊಂಡಿದ್ದರು. ಆದರೆ ಅದನ್ನು ಮರುಪಾವತಿಸಲು ಸಾಧ್ಯವಾಗದೆ ಕಂಗೆಟ್ಟಿದ್ದ ಅವರು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಂದಸೌರ್ ಜಿಲ್ಲೆಯ ದೊರಾವಡಿ ಗ್ರಾಮದಲ್ಲಿ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೂ ರವಿವಾರ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News