ಮೆಸ್ಕಾಂನ ಗುರುರಾಜ ಸುವರ್ಣರಿಗೆ ಬೀಳ್ಕೊಡುಗೆ

Update: 2017-07-03 13:36 GMT

ಉಡುಪಿ, ಜು.3: ಉಡುಪಿ ಮೆಸ್ಕಾಂನ ಇಂಜಿನಿಯರ್‌ಗಳ ಒಕ್ಕೂಟದ ವತಿಯಿಂದ ಉಡುಪಿ ಮೆಸ್ಕಾಂನ ಅಧೀಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಗುರುರಾಜ ಸುವರ್ಣ ಅವರನ್ನು ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಇತ್ತೀಚೆಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

  ಉಡುಪಿ ಕಾರ್ಯನಿರ್ವಾಹಕ ಇಂಜಿನಿಯರ್ ಶರತ್‌ಚಂದ್ರ ಪಾಲ್, ಕುಂದಾಪುರ ಪ್ರಭಾರ ಕಾರ್ಯನಿರ್ವಾಹಕ ಇಂಜಿನಿಯರ್ ಗಿರೀಶ್ ಕುಮಾರ್, ಮಣಿಪಾಲದ ಸಹಾಯಕ ಇಂಜಿನಿಯರ್ ಸಂತೋಷ್ ನಾಯಕ್ ಮುಖ್ಯ ಅತಿಥಿಗಳಾಗಿದ್ದರು.

ಈ ಸಂದರ್ಭದಲ್ಲಿ ಮೆಸ್ಕಾಂನ ಹಿರಿಯ ಅಧಿಕಾರಿಗಳಾದ ಗಣರಾಜ ಭಟ್, ಪ್ರಾಣೇಶ್ ಮೊದಲಾದವರು ಉಪಸ್ಥಿತರಿದ್ದರು. ಉಡುಪಿ ವೃತ್ತ ಕಾರ್ಯ ನಿರ್ವಾಹಕ ಇಂಜಿನಿಯರ್ ದಿನೇಶ್ ಉಪಾಧ್ಯಾಯ ಸ್ವಾಗತಿಸಿದರು. ವಿನಾಯಕ ಕಾಮತ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News