ಜು.11ರವರೆಗೆ ನಿಷೇಧಾಜ್ಞೆ ವಿಸ್ತರಣೆ
Update: 2017-07-03 19:14 IST
ಮಂಗಳೂರು, ಜು.3: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗೆ (ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಸಂಬಂಧಿಸಿದಂತೆ ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ಜು.4ರ ಮಧ್ಯರಾತ್ರಿ 12 ಗಂಟೆಯಿಂದ ಜು.11ರ ಮಧ್ಯರಾತ್ರಿ 12 ಗಂಟೆಯವರೆಗೆ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆಯನ್ನು ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.