ಮಿಲಿಟರಿ ಪಿಂಚಣಿ ಅರ್ಜಿ ಆಹ್ವಾನ
Update: 2017-07-04 12:55 GMT
ಚಿಕ್ಕಮಗಳೂರು, ಜು.4: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಕರ್ನಾಟಕದ ಮೂಲನಿವಾಸಿ ಮಿಲಿಟರಿ ಪಿಂಚಣಿದಾರ/ಪಿಂಚಣಿರಹಿತ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
1 ನೇ ತರಗತಿಯಿಂದ ಅಂತಿಮ ಪದವಿ ಮತ್ತು ಡಿಪ್ಲೋಮ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಾಜಿ ಸೈನಿಕರ/ ಅವಲಂಬಿತರ ಮಕ್ಕಳು ಈ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ, ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನ.
ಕೃಷಿ, ತಾಂತ್ರಿಕ, ವೈದ್ಯಕೀಯ ಮತ್ತಿತರ ಕೋರ್ಸುಗಳ ವಿದ್ಯಾರ್ಥಿಗಳು ಪ್ರಸಕ್ತ ವರ್ಷದ ಪ್ರವೇಶ ಪಡೆದ ಒಂದು ತಿಂಗಳೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಂಕರೀಪುರಂ, ಬಿ.ಎಂ ರಸ್ತೆ, ಹಾಸನ ಇವರನ್ನು ಸಂಪರ್ಕಿಸಬಹುದಾಗಿದೆ.