ಅಂಬೇಡ್ಕರ್ ನಿವಾಸ ಯೋಜನೆಗೆ ಅರ್ಜಿ ಆಹ್ವಾನ

Update: 2017-07-04 16:16 GMT

ಉಡುಪಿ, ಜು.4: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ 2017-18ನೇ ಸಾಲಿನ ಡಾ.ಬಿ.ಆರ್ ಅಂಬೇಡ್ಕರ್ ನಿವಾಸ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಮನೆ ನಿರ್ಮಿಸಲು ಸ್ವಂತ ನಿವೇಶನ ಹೊಂದಿದ ಮಹಿಳೆ (ಒಂದು ವೇಳೆ ಗಂಡನ ಹೆಸರಿನಲ್ಲಿ ನಿವೇಶನ ಇದ್ದರೆ ಗಂಡನ ಒಪ್ಪಿಗೆ ಪತ್ರದ ಮೂಲಕ ಮಹಿಳೆಗೆ) ವಿಧುರ, ಅಂಗವಿಕಲ ಹಾಗೂ ಹಿರಿಯ ನಾಗರಿಕ ಅರ್ಹ ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಅರ್ಹ ಫಲಾನುಭವಿಗಳು ಸೂಕ್ತ ದಾಖಲೆಗಳೊಂದಿಗೆ ವಸತಿ ಸೌಲ್ಯ ಪಡೆಯಲು ಉಡುಪಿ ನಗರಸಭಾ ಕಚೇರಿಗೆ ಜು.31ರೊಳಗೆ ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ನಗರಸಭಾ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News