ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Update: 2017-07-04 16:20 GMT

ಪುತ್ತೂರು,ಜು.4: ಕಳೆದ 33 ವರ್ಷಗಳ ಹಿಂದೆ ಹಲ್ಲೆ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದು ತಲೆಮರಿಸಿಕೊಂಡಿದ್ದ ಬಾಡಿ ವಾರಂಟ್ ಆರೋಪಿಯನ್ನು ಮಂಗಳವಾರ ಪುತ್ತೂರು ನಗರ ಪೊಲೀಸರು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನಗರದ ನೆಲ್ಲಿಕಟ್ಟೆ ನಿವಾಸಿ ಅಣ್ಣಪ್ಪ ಎಂಬವರ ಪುತ್ರ ಜಯಪ್ರಕಾಶ್(50) ಬಂಧಿತ ಆರೋಪಿ ಜಯಪ್ರಕಾಶ್ ಹಲ್ಲೆ ಪ್ರಕರಣದ ಆರೋಪಿಯಾಗಿದ್ದು, ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದ್ದು ಈತನ ವಿರುದ್ದ ನ್ಯಾಯಾಲಯ ಬಾಡಿ ವಾರಂಟ್ ಜಾರಿಗೊಳಿಸಿತ್ತು.

ಮಂಗಳವಾರ ನಗರ ಪೊಲೀಸರು ನಗರ ಕೊರ್ಟು ರಸ್ತೆಯಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ನಗರ ಠಾಣೆಯ ಹೆಡ್‍ಕಾನ್ಸ್‍ಟೇಬಲ್ ಪರಮೇಶ್ವರ ಮತ್ತು ಜಯರಾಂ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News