ಸಾಮಾಜಿಕ-ಆರ್ಥಿಕ ಸಮೀಕ್ಷಾ ವರದಿ ಶೀಘ್ರ ಬಿಡುಗಡೆ: ಕಾಂತರಾಜು

Update: 2017-07-06 13:54 GMT

ಬೆಂಗಳೂರು, ಜು.6: ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ರಾಜ್ಯದ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ವರದಿಯನ್ನು ಶೀಘ್ರ ಬಿಡುಗಡೆ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜು ತಿಳಿಸಿದ್ದಾರೆ.

ಗುರುವಾರ ನಗರದ ದೇವರಾಜ ಅರಸು ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ, ಆರ್ಥಿಕ ಸಮೀಕ್ಷಾ ವರದಿಯು ಪೂರ್ಣಗೊಂಡಿದ್ದು, ಸರಕಾರದ ಜೊತೆ ಮಾತನಾಡಿ ದಿನಾಂಕವನ್ನು ಗೊತ್ತುಪಡಿಸಿ ವರದಿಯನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಗ್ರಾಮಾಂತರ ಪ್ರದೇಶದಲ್ಲಿ ಶೇ.98 ಹಾಗೂ ನಗರ ಪ್ರದೇಶದಲ್ಲಿ ಶೇ.88ರಷ್ಟು ಸಮೀಕ್ಷೆ ನಡೆಸಲು ನಮ್ಮ ಆಯೋಗ ಯಶಸ್ವಿಯಾಗಿದೆ. ಇದು ಕಡಿಮೆ ಸಾಧನೆಯಲ್ಲ. ಒಂದೇ ಪ್ರದೇಶಕ್ಕೆ ಹಲವಾರು ಬಾರಿ ಹೋಗಿ ಸಮೀಕ್ಷೆ ನಡೆಸಲಾಗಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News