ಜುನೈದ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಬಂಧನ

Update: 2017-07-08 14:35 GMT

ಹೊಸದಿಲ್ಲಿ, ಜು.8: ಹರ್ಯಾಣದಲ್ಲಿ ರೈಲಿನಲ್ಲಿ 16 ವರ್ಷದ ಬಾಲಕ ಜುನೈದ್ ನನ್ನು ಹತ್ಯೆಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೊಲೆಗೈದಿರುವುದಾಗಿ ಒಪ್ಪಿಕೊಂಡಿದ್ದು, ಕಾನೂನು ಕಾರಣಗಳಿಂದ ಆತನ ಹೆಸರನ್ನು ಗೌಪ್ಯವಾಗಿಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದ್ದು, ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಪ್ರಕರಣದ ಪ್ರಮುಖ ಆರೋಪಿಯನ್ನು ತಪ್ಪಾಗಿ ಗುರುತಿಸಿದ್ದೆವು ಎಂದು ಹರ್ಯಾಣ ಪೊಲೀಸರು ಹೇಳಿಕೆ ನೀಡಿರುವ ನಂತರ ಈ ಬಂಧನ ನಡೆದಿದೆ. ಕೊಲೆಗಾರನ ಬಗ್ಗೆ ಮಾಹಿತಿ ನೀಡುವವರಿಗೆ 2 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಘೋಷಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News