ಅತ್ಯಾಚಾರಕ್ಕೆ ಯತ್ನ: ಆರೋಪಿ ಸೆರೆ

Update: 2017-07-09 17:17 GMT

ಬೆಳ್ತಂಗಡಿ, ಜು. 9: ಕಡಿರುದ್ಯಾವರ ಗ್ರಾಮದಲ್ಲಿ ಬಾಲಕಿಯೋರ್ವಳ ಮೇಲೆ  ವ್ಯಕ್ತಿಯೋರ್ವ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ರವಿವಾರ ಮಧ್ಯಾಹ್ನ ನಡೆದಿದ್ದು ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿಯನ್ನು ರಮೇಶ ಎಂದು ಗುರುತಿಸಲಾಗಿದ್ದು, ಈತ ಮುಂಡಾಜೆ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. 

ಬಾಲಕಿ ಒಬ್ಬಳೇ ನಡೆದುಕೊಂಡು ಹೋಗುತ್ತಿದ್ದಾಗ ನಿರ್ಜನ ಪ್ರದೇಶದಲ್ಲಿ ಆತ ಬಾಲಕಿಯನ್ನು ಅಡ್ಡಗಟ್ಟಿ ಕಾಡಿಗೆ ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದ್ದು, ಬಾಲಕಿ ಆತನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು, ಆಕೆಯ ಮೈಮೇಲೆ ಗಾಯಗಳಾಗಿವೆ. ಕಿರುಚಾಟದ ಶಬ್ದ ಕೇಳಿದ ಸ್ಥಳೀಯರು ಬಂದಾಗ ಆತ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು, ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಈತ ಈ ಹಿಂದೆಯೂ ಅತ್ಯಾಚಾರ ಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದು, ಜೈಲಿಗೆ ಹೋಗಿ ಬಂದಿದ್ದಾನೆ ಎನ್ನಲಾಗಿದ್ದು, ಬೆಳ್ತಂಗಡಿ ಹಾಗೂ ಧರ್ಮಸ್ಥಳ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News