ವಾಹನ ರಿವರ್ಸ್ ತೆಗೆಯುವ ವಿಚಾರದಲ್ಲಿ ವಾಗ್ವಾದ: ಯುವಕನಿಗೆ ಇರಿದ ದುಷ್ಕರ್ಮಿಗಳು
Update: 2017-07-11 17:51 GMT
ಉಳ್ಳಾಲ, ಜು.11: ವಾಹನ ರಿವರ್ಸ್ ತೆಗೆಯುವ ವಿಚಾರದಲ್ಲಿ ಟೆಂಪೋ ಚಾಲಕರೋರ್ವರಿಗೆ ತಂಡವೊಂದು ಚೂರಿಯಿಂದ ಇರಿದ ಘಟನೆ ಇಲ್ಲಿನ ಮಾಸ್ತಿಕಟ್ಟೆ ಆಝಾದ್ ನಗರದಲ್ಲಿ ನಡೆದಿದೆ.
ವಾಹನ ರಿವರ್ಸ್ ತೆಗೆಯುವ ವಿಚಾರದಲ್ಲಿ ಟೆಂಪೋ ಚಾಲಕ ಆಸ್ಟಿನ್ (27) ಎಂಬವರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದಿದ್ದಾರೆ. ಕಾರಿನಲ್ಲಿ ಬಂದ ತಂಡ ಚೂರಿಯಿಂದ ಇರಿದಿದೆ ಎನ್ನಲಾಗಿದೆ. ಗಾಯಗೊಂಡಿರುವ ಆಸ್ಟಿನ್ ಉಳ್ಳಾಲ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಚಿವ ಯು.ಟಿ. ಖಾದರ್ ಆಸ್ಪತ್ರೆಗೆ ಭೇಟಿ:
ಚೂರಿ ಇರಿತದಿಂದ ಗಾಯಗೊಂಡು ಉಳ್ಳಾಲ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಟೆಂಪೋ ಚಾಲಕ ಆಸ್ಟಿನ್ ರನ್ನು ಸಚಿವ ಯು.ಟಿ. ಖಾದರ್ ಇಂದು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ನಂತರ ಮಾತನಾಡಿದ ಅವರು ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳುವುದಾಗಿ ಪತ್ರಿಕೆಗೆ ತಿಳಿಸಿದರು.