ಆಸ್ಟಿನ್ ರನ್ನು ಭೇಟಿಯಾದ ಸಂಸದ ನಳಿನ್

Update: 2017-07-12 15:20 GMT

ಉಳ್ಳಾಲ, ಜು. 12: ಸಂಸದ ನಳಿನ್ ಕುಮಾರ್ ಕಟೀಲ್ ಉಳ್ಳಾಲ ಆಝಾದ್ ನಗರದಲ್ಲಿ ಮಂಗಳವಾರದಂದು ದುಷ್ಕರ್ಮಿಗಳ ದಾಳಿಗೆ ಒಳಗಾದ ಉಳ್ಳಾಲ ಉಳಿಯ ನಿವಾಸಿ ಟೆಂಪೋ ಚಾಲಕ ಆಸ್ಟಿನ್ ರನ್ನು ಉಳ್ಳಾಲದ ಆಸ್ಪತ್ರೆಯಲ್ಲಿ ಭೇಟಿ ಮಾಡಿದರು.

ನಿರಪರಾಧಿಗಳ ಮೇಲಿನ ಹಲ್ಲೆ ಖಂಡನೀಯ, ಅಮಾಯಕರ ಮೇಲೆ ಯಾವುದೇ ರೀತಿಯ ದೌರ್ಜನ್ಯಗಳು ನಡೆಯದಂತೆ ಪೊಲೀಸರಿಗೆ ಸೂಚಿಸಲಾಗಿದೆ. ಯಾರೂ ಭಯಭೀತಗೊಳ್ಳದಿರಿ, ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಮುಂದೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು  ಬಂದೋಬಸ್ತ್ ಏರ್ಪಡಿಸಿದ್ದಾರೆ ಎಂದರು.

ಈ ಸಂದರ್ಭ ವಿಧಾನಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು, ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಡಾ. ಮುನೀರ್ ಬಾವಾ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಮೋಹನರಾಜ್, ಉಪಾಧ್ಯಕ್ಷ ಯಶವಂತ ಅಮೀನ್, ಫಝಲ್ ಅಸೈಗೋಳಿ, ಅಝ್ಗರ್ ಮುಡಿಪು, ರಾಜೇಶ್ ಉಳ್ಳಾಲ, ಪೊಡಿಮೋನು ಮೊದಲಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭ ಸಂಸದರು ಇತ್ತೀಚೆಗೆ ನಿಧನರಾದ ಉಳ್ಳಾಲ ಪುರಸಭೆಯ ಕೌನ್ಸಿಲರ್ ಹನೀಫ್ ಕೋಟೆಪುರ ಇವರ ನಿವಾಸಕ್ಕೆ ಭೇಟಿ ನೀಡಿ ಮನೆಮಂದಿಗೆ ಸಾಂತ್ವನ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News