ಗೋಮಾಂಸ ಸಾಗಾಟ ಆರೋಪ: ವ್ಯಕ್ತಿಗೆ ಥಳಿಸಿದ ಗೋರಕ್ಷಕರ ಗುಂಪು

Update: 2017-07-13 04:44 GMT

ಹೊಸದಿಲ್ಲಿ, ಜು.13: ಗೋಮಾಂಸ ಸಾಗಾಟ ಮಾಡುತ್ತಿದ್ದಾರೆ ಎನ್ನುವ ಆರೋಪದಲ್ಲಿ ವ್ಯಕ್ತಿಯೊಬ್ಬರಿಗೆ ಗೋರಕ್ಷಕರ ಗುಂಪೊಂದು ನಿರ್ದಯವಾಗಿ ಥಳಿಸಿದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿ ನಾಗ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಕ್ತಿಯೋರ್ವನನ್ನ ಸುತ್ತುವರಿದ ದುಷ್ಕರ್ಮಿಗಳು ಗುಂಪು ನಿರ್ದಯವಾಗಿ ಥಳಿಸುತ್ತಿರುವುದು ದೃಶ್ಯದಲ್ಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News