ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2017-07-13 16:54 GMT

ಉಡುಪಿ, ಜು.13: ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮೂಲಕ ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ ‘ಕೃಷಿ ಪಂಡಿತ ಪ್ರಶಸ್ತಿ’ಯನ್ನು ನೀಡಲಾಗುತ್ತಿದೆ. ಕೃಷಿ ಪಂಡಿತ ಪ್ರಶಸ್ತಿಯಲ್ಲಿ ಭಾಗವಹಿಸಲಿಚ್ಛಿಸುವವರು ಉಡುಪಿ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ/ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿ ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರಬೇಕು. ಭಾಗವಹಿಸುವವರ ಸಂಶೋಧನೆ/ಸಾಧನೆಗಳು ಮೂಲ ಸ್ವರೂಪದ್ದಾಗಿದ್ದು, ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು. ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು.
 ಈ ಪ್ರಶಸ್ತಿಗೆ ನಾಮನಿರ್ದೇಶನ ಸಲ್ಲಿಸಬಯಸುವ ರೈತರುಗಳು ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಮಾಹಿತಿಯನ್ನು ಭರ್ತಿ ಮಾಡಿ ಆ.10ರೊಳಗೆ ಇಲಾಖೆಗೆ ಸಲ್ಲಿಸಬಹುದು. ಕೃಷಿ ಪಂಡಿತ ಪ್ರಶಸ್ತಿಯ ಪ್ರಥಮ ಬಹುಮಾನ ಒಂದು ಲಕ್ಷ ರೂ., ದ್ವಿತೀಯ 75,000ರೂ., ತೃತೀಯ 50,000ರೂ. ಹಾಗೂ ಕೃಷಿ ಪಂಡಿತ ಉದಯೋನ್ಮುಖ ಪ್ರಶಸ್ತಿ 25,000ರೂ. ನಗದು ಹೊಂದಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News