×
Ad

ಎಸ್ಸೆಸ್ಸೆಫ್‌ನಿಂದ ರಕ್ತ ಶೇಖರಣಾ ಅಭಿಯಾನ

Update: 2017-07-14 18:53 IST

ಬಂಟ್ವಾಳ, ಜು.14: ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯ ಹತ್ತು ಆಸ್ಪತ್ರೆ ಕೇಂದ್ರಗಳಲ್ಲಿ ರಕ್ತ ಶೇಖರಣಾ ಅಭಿಯಾನವು ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಕೆ.ಪಿ ಸಿರಾಜುದ್ದೀನ್ ಸಖಾಫಿ ಕನ್ಯಾನ ಅವರ ನೇತೃತ್ವದಲ್ಲಿ 10 ಡಿವಿಷನ್‌ಗಳ ಸಹ-ಭಾಗಿತ್ವದೊಂದಿಗೆ ನಡೆಯಲಿರುವುದು.

ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ವತಿಯಿಂದ ಜು.16 ರಂದು ಬೆಳಗ್ಗೆ ತಾಜುಲ್ ಉಲಮಾ ಸುನ್ನೀ ಸೆಂಟರ್ ದೇರಳಕಟ್ಟೆಯಲ್ಲಿ ನಡೆಯಲಿರುವುದು.

ಜಿಲ್ಲೆಯಲ್ಲಿ ಒಟ್ಟು ಸುಮಾರು 2 ಸಾವಿರ ಯೂನಿಟ್ ರಕ್ತ ಶೇಖರಿಸುವ ಗುರಿಯನ್ನು ಹೊಂದಲಾಗಿದೆ ಎಂದು ಎಸ್ಸೆಸ್ಸೆಫ್ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲಂದರ್ ಪದ್ಮುಂಜ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News