×
Ad

​ಹಣಕಾಸಿನ ವೈಷಮ್ಯ: ವ್ಯಕ್ತಿಗೆ ಹಲ್ಲೆ

Update: 2017-07-14 23:12 IST

ಮಂಗಳೂರು, ಜು.14: ನಗರದ ನಿಡ್ಡೇಲ್ ಎಂಬಲ್ಲಿ ವ್ಯಕ್ತಿಯೊಬ್ಬರಿಗೆ ಹಣಕಾಸಿನ ವೈಷಮ್ಯಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಸತೀಶ್ (50) ಹಲ್ಲೆಗೊಳಗಾದ ವ್ಯಕ್ತಿ. ಇವರು ಶುಕ್ರವಾರ ಸಂಜೆ 4:30ರ ವೇಳೆಗೆ ನಿಡ್ಡೇಲ್ ಬಳಿ ಇದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಣಕಾಸಿನ ವೈಷಮ್ಯವೇ ಹಲ್ಲೆಗೆ ಕಾರಣ ಎನ್ನಲಾಗಿದೆ. ಹಲ್ಲೆ ನಡೆಸಿದ ವ್ಯಕ್ತಿಗಳಲ್ಲಿ ಓರ್ವ ಅರ್ಜುನ್ ಎಂದು ಗುರುತಿಸಲಾಗಿದೆ. ಕಂಕನಾಡಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News