ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣ: ನಾಲ್ವರ ಬಂಧನ?

Update: 2017-07-15 06:00 GMT

ಬಂಟ್ವಾಳ, ಜು.15: ಬಿ.ಸಿ.ರೋಡಿನಲ್ಲಿ ಇತ್ತೀಚೆಗೆ ನಡೆದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಈ ಬಗ್ಗೆ ಯಾವುದೇ ಮಾಹಿತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ.

ಹತ್ಯೆಯ ಹಿಂದೆ ಮರಳು ಮಾಫಿಯಾದ ಕೈವಾಡ ಇದೆ ಎಂದು ಹೇಳಲಾಗುತ್ತಿದ್ದು, ಈ ನಿಟ್ಟಿನಲ್ಲಿ ತನಿಖಾ ತಂಡವೂ ತೀವ್ರ ತನಿಖೆ ಮುಂದುವರಿಸಿದೆ.

ಶರತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ವಲಯ ಐಜಿಪಿ ಪಿ.ಹರಿಶೇಖರನ್ ನೇತೃತ್ವದಲ್ಲಿ ಆರು ತನಿಖಾ ತಂಡವನ್ನು ರಚಿಸಲಾಗಿತ್ತು. ಶರತ್ ಬಿ.ಸಿ.ರೋಡಿನಲ್ಲಿರುವ ತನ್ನ ತಂದೆಯ ಉದಯ ಲಾಂಡ್ರಿಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ದಾಳಿಗೊಳಗಾಗಿ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News