ಚಾಮರಾಜನಗರದಲ್ಲಿ ಯಡಿಯೂರಪ್ಪ ವಿರುದ್ದ ಎಸ್ ಡಿ ಪಿ ಐ ಪ್ರತಿಭಟನೆ

Update: 2017-07-16 13:33 GMT

ಚಾಮರಾಜನಗರ,ಜು.16 : ಮಂಗಳೂರು ಸೇರಿದಂತೆ ರಾಜ್ಯ ಕರಾವಳಿ ಪ್ರದೇಶದಲ್ಲಿ ಹಿಂದೂ ಮುಸ್ಲೀಂ ನಡುವೆ ದ್ವೇಷಾಗ್ನಿ ಹುಟ್ಟು ಹಾಕಲು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವಾರು ಮುಖಂಡರುಗಳು ಪ್ರಯತ್ನಿಸುತ್ತಿದ್ದಾರೆ ಇವರನ್ನು ಬಂಧಿಸುವಂತೆ ಚಾಮರಾಜನಗರದಲ್ಲಿ ಎಸ್ ಡಿ ಪಿ ಐ ಯಿಂದ ಪ್ರತಿಭಟನೆ ನಡೆಸಲಾಯಿತು.

ಚಾಮರಾಜನಗರದ ಲಾರಿ ನಿಲ್ದಾಣದಿಂದ ಎಸ್.ಡಿ.ಪಿ.ಐ ಕಾರ್ಯಕರ್ತರು ಜಿಲ್ಲಾಡಳಿತ ಭವನದ ವರೆಗೆ ಪಾದಯಾತ್ರೆ ಮೂಲಕ ಪ್ರತಿಭಟನೆ ಮೆರವಣಿಗೆ ನಡೆಸಿ ಜಿಲ್ಲಾಡಳಿತದ ಭವನದ ಮುಂದೆ ಧರಣಿ ಕುಳಿತರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ನಳಿನ್ ಕಟಿಲ್ , ಶೋಭಾಕರಂದ್ಲಾಜೆ ಸೇರಿದಂತೆ ಹಲವಾರು ಬಿಜೆಪಿ ನಾಯಕರುಗಳು ಕರಾವಳಿ ಪ್ರದೇಶದಲ್ಲಿ ಕೋಮು ಪ್ರಚೋದನಾಕಾರಿ ಭಾಷಣ ಮಾಡುತ್ತಿದ್ದಾರೆ ಇದರಿಂದ ಶಾಂತಿ ಪ್ರಿಯವಾದ ಕರ್ನಾಟಕ ದಲ್ಲಿ ಗಲಭೆಗಳು ಆಗುವ ಸಂಭವಿದಿದ್ದು, ಈ ಬಗ್ಗೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಪ್ರಚೋಧನಕಾರಿ ಭಾಷಣ ಮಾಡಿ, ಕೋಮುಗಲಭೆಗೆ ಕಾರಣರಾಗುತ್ತಿರುವ ಇಂತಹ ನಾಯಕರನ್ನು ಬಂಧಿಸುವಂತೆ ಆಗ್ರಹಿಸಿಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News