ಕೋಡಿ ಬ್ಯಾರೀಸ್‌ನಲ್ಲಿ 'ಕಡಲಸಿರಿ' ಉದ್ಘಾಟನೆ

Update: 2017-07-17 07:18 GMT

ಕುಂದಾಪುರ, ಜು.17: ಕೋಡಿಯ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ಸಂಘ 'ಕಡಲಸಿರಿ' ಇತ್ತೀಚೆಗೆ ಉದ್ಘಾಟನೆಗೊಂಡಿತು.

ನಾಡಿನ ಹೆಸರಾಂತ ಸುಗಮ ಸಂಗೀತ ಗಾಯಕ ಶ್ರೀ ಚಂದ್ರಶೇಖರ ಕೆದ್ಲಾಯ ಅವರು ಸಂಘವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, 'ಕಡಲಸಿರಿ'ಯು ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆೆಗಳನ್ನು ಅನಾವರಣಗೊಳಿಸುವ ವೇದಿಕೆಯಾಗಲಿ ಎಂದು ಶುಭ ಹಾರೈಸಿದರು.

ಬಳಿಕ ಗೋಪಾಲಕೃಷ್ಣ ಅಡಿಗ, ನಿಸಾರ್ ಅಹಮದ್‌ರ ಕವಿತೆಗಳನ್ನು ಹಾಡಿ ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರರಾದರು. ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾಜಿ ಮಾಸ್ಟರ್ ಮೆಹಮ್ಮೂದ್ ಸಾಂಸ್ಕೃತಿಕ ಸಂಘಕ್ಕೆ ಶುಭ ಹಾರೈಸಿದರು.

ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಶಮೀರ್ ಮಾತನಾಡಿದರು. ಕಡಲಸಿರಿ ಘಟಕದ ಸಂಘಟಕ ಸಂದೀಪ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿ ಸಾಂಸ್ಕೃತಿಕ ಕಾರ್ಯದರ್ಶಿ ವಿಶ್ವತಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಅರ್ಪದ್ ಅವರು ಕೆದ್ಲಾಯರ ಪರಿಚಯ ಮಾಡಿಕೊಟ್ಟರು. ವಿದ್ಯಾರ್ಥಿ ಶಶಾಂಕ ವಂದಿಸಿದರು. ವಿದ್ಯಾರ್ಥಿನಿ ಕವನಾ ಕಾರ್ಯಕ್ರಮ ನಿರೂಪಿಸಿದರು 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News