ಈಶ್ವರಪ್ಪ ಆಪ್ತ ಸಹಾಯಕ ಅಪಹರಣ ಪ್ರಕರಣ:ಬಿಎಸ್ವೈ ಸಂಬಂಧಿಗೆ ನೋಟಿಸ್
Update: 2017-07-17 12:00 GMT
ಬೆಂಗಳೂರು, ಜು.17: ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪಆಪ್ತ ಸಹಾಯಕ ವಿನಯ್ ಅಪಹರಣ ಪ್ರಕರಣ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಂಬಂಧಿ ಎನ್.ಆರ್.ಸಂತೋಷ್ಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಬೆಂಗಳೂರಿನ ಮಹಾಲಕ್ಷ್ಮೀಲೇಔಟ್ ಪೊಲೀಸರು, ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸಂತೋಷ್ ಮನೆಗೆ ತೆರಳಿ ನೋಟಿಸ್ ನೀಡಿದ್ದು, ಈ ವೇಳೆ ಸಂತೋಷ್ ತಂದೆ ವೀರಭದ್ರಯ್ಯ ಅವರು ನೋಟಿಸ್ ಸ್ವೀಕರಿಸಲಿಲ್ಲ ಎಂದು ಮೂಲಗಳು ತಿಳಿಸಿವೆ.
ಬಳಿಕ ಪೊಲೀಸರು ಮನೆಯ ಗೋಡೆ ಮೇಲೆ ನೋಟಿಸ್ ಅಂಟಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.