ಲೋಕಾಯುಕ್ತದಿಂದ ದೂರು ಸ್ವೀಕಾರ

Update: 2017-07-20 18:07 GMT

ಉಡುಪಿ, ಜು.20:ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಟಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಈ ಕೆಳಕಂಡ ಸ್ಥಳಗಳಲ್ಲಿ ಸ್ವೀಕರಿಸಲಾಗುವುದು.

ಜು.24ರಂದು ಬೆಳಗ್ಗೆ 11:00ರಿಂದ ಅಪರಾಹ್ನ 12:30ರವರೆಗೆ ಕಾರ್ಕಳ ಪ್ರವಾಸಿ ಮಂದಿರ, ಜು.25ರಂದು ಬೆಳಗ್ಗೆ 11:00ರಿಂದ 12:30ರವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ, ಜು.26ರಂದು ಅಪರಾಹ್ನ 2:30ರಿಂದ ಸಂಜೆ 4:00ರವರೆಗೆ ಕುಂದಾಪುರ ಪ್ರವಾಸಿ ಮಂದಿರ ಹಾಗೂ ಜು.27ರಂದು ಬೆಳಗ್ಗೆ 11:00ರಿಂದ ಅಪರಾಹ್ನ 12:30ರವರೆಗೆ ಕಾಪು ಪುರಸಭಾ ಸಭಾಂಗಣ ದಲ್ಲಿ ಅರ್ಜಿಗಳನ್ನು ಸ್ವೀಕರಿಸಲಾಗುವುದು.
ಉಡುಪಿ ತಾಲೂಕಿಗೆ ಸಂಬಂಧಪಟ್ಟ ದೂರು ಅರ್ಜಿಗಳನ್ನು ನೀಡುವವರು ನೇರವಾಗಿ ಕರ್ನಾಟಕ ಲೋಕಾಯುಕ್ತ ಉಡುಪಿ ಕಚೇರಿಯನ್ನು ಸಂಪರ್ಕಿಸ ಬಹುದು. ಸಾರ್ವಜನಿಕರು ನಿಗದಿತ ದೂರು ಅರ್ಜಿಗಳಾದ ಪ್ರಪತ್ರ 1 ಮತ್ತು 2ನ್ನು ಪಡೆದು ಅಫಿದವಿತ್ ಮಾಡಿಸಿ ಸಂಬಂಧಪಟ್ಟ ದಾಖಲೆಗಳ ಪ್ರತಿ ಗಳೊಂದಿಗೆ ದೂರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದರಲ್ಲಿ ಕರ್ನಾಟಕ ಲೋಕಾಯುಕ್ತ ಉಡುಪಿ ಘಟಕದ ಪೋಲಿಸ್ ಉಪಾಧೀಕ್ಷಕರು ಭಾಗವಹಿಸಲಿದ್ದಾರೆ.
ಸಾರ್ವಜನಿಕರಿಗೆ ತಮ್ಮ ಸರಕಾರಿ ಕೆಲಸ ಕಾರ್ಯಗಳಲ್ಲಿ ಯಾವುದೇ ತೊಂದರೆಗಳಾದಲ್ಲಿ ಪೋಲಿಸ್ ಉಪಾಧೀಕ್ಷಕರು ಕರ್ನಾಟಕ ಲೋಕಾಯುಕ್ತ ಉಡುಪಿ (ದೂರವಾಣಿ:0820-2527770 ಅಥವಾ 0820-2536661) ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News