ಜಿಲ್ಲಾ ಬಿಜೆಪಿ ಅಭಿನಂದನೆ
Update: 2017-07-20 18:22 GMT
ಉಡುಪಿ, ಜು.20: ದೇಶದ 14ನೇ ರಾಷ್ಟ್ರಪತಿಯಾಗಿ ಆಯ್ಕೆಯಾದ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ರಾಮನಾಥ ಕೋವಿಂದ್ ಅವರಿಗೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಅಭಿನಂದನೆ ಸಲ್ಲಿಸಿದ್ದಾರೆ.
ನೂತನ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಆಡಳಿತಾವಧಿಯಲ್ಲಿ ದೇಶ ಶಾಂತಿ, ನೆಮ್ಮದಿ ಹಾಗು ಸುಭೀಕ್ಷೆಯಿಂದ ಮುನ್ನಡೆಯುವಂತಾಗಲಿ ಎಂದು ಅವರು ತಿಳಿಸಿದ್ದಾರೆ.
ವಿಜಯೋತ್ಸವ: ಬಿಜೆಪಿಯ ವತಿಯಿಂದ ಉಡುಪಿ ಸೇರಿದಂತೆ ಜಿಲ್ಲೆಯ ನಾನಾ ಕಡೆಗಳಲ್ಲಿ ಸಾರ್ವಜನಿಕರಿಗೆ ಸಿಹಿತಿಂಡಿ ಹಂಚಿ ವಿಜಯೋತ್ಸವವನ್ನು ಆಚರಿಸಲಾಯಿತು.
ಬಿಜೆಪಿಯ ವತಿಯಿಂದ ಉಡುಪಿ ಸೇರಿದಂತೆ ಜಿಲ್ಲೆಯ ನಾನಾ ಕಡೆಗಳಲ್ಲಿ ಸಾರ್ವಜನಿಕರಿಗೆ ಸಿಹಿತಿಂಡಿ ಹಂಚಿ ವಿಜಯೋತ್ಸವವನ್ನು ಆಚರಿಸಲಾಯಿತು.