ಜೈಲಿನಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ

Update: 2017-07-21 14:22 GMT

ಮಂಡ್ಯ, ಜು.21: ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಆರೋಪಿ ಗುರುವಾರ ತಡರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಳೆದ ಮೂರುವರೆ ತಿಂಗಳಿಂದ ಕಾರಾಗೃಹದಲ್ಲಿದ್ದ ಪಾಂಡವಪುರ ತಾಲೂಕು ಚಿನಕುರಳಿ ಗ್ರಾಮದ ರಾಘವೇಂದ್ರ(33) ಆತ್ಮಹತ್ಯೆ ಮಾಡಿಕೊಂಡವ.
ಸರಗಳ್ಳತನದ ಆರೋಪದಲ್ಲಿ ಜೈಲು ಸೇರಿದ್ದ ರಾಘವೇಂದ್ರನನ್ನು ನೋಡಲು ಪೋಷಕರು ಒಮ್ಮೆಯೂ ನೋಡಲು ಬರದಿರದ ಕಾರಣ ಆತ ಖಿನ್ನತೆಗೊಳಗಾಗಿದ್ದ ಎನ್ನಲಾಗಿದೆ.

ತಡರಾತ್ರಿ ತನ್ನ ಇತರ ಕೈದಿಗಳು ನಿದ್ರೆ ಹೋದ ಬಳಿಕ ತನಗೆ ನೀಡಿದ್ದ ಹೊದಿಕೆಯನ್ನು ಕೊರಳಿಗೆ ಸುತ್ತಿಕೊಂಡು ಕೊಠಡಿಯ ಕಿಟಕಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತನ್ನನ್ನು ನೋಡಲು ಪೋಷಕರು ಬರದಿದ್ದ ಹಿನ್ನೆಲೆಯಲ್ಲಿ ಬೇಸರಗೊಂಡಿದ್ದ ರಾಘವೇಂದ್ರ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾನೆ ಎನ್ನಲಾಗಿದ್ದು, ಈ ಸಂಬಂಧ ತನಿಖೆ ನಡೆಸಲಾಗುವುದು ಎಂದು ಎಸ್ಪಿ ರಾಧಿಕಾ ತಿಳಿಸಿದ್ದಾರೆ.
ಈ ಸಂಬಂಧ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 176ರಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News