8 ವರ್ಷದ ಹಿಂದಿನ ವಾಹನ ಕಳವು ಪ್ರಕರಣ: ಆರೋಪಿ ಸೆರೆ

Update: 2017-07-22 18:05 GMT

ಪುತ್ತೂರು, ಜು. 22: ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ವಾಹನ ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಪುತ್ತೂರು ನಗರ ಪೊಲೀಸರು ಶನಿವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕೇರಳದ ಕಾಸರಗೋಡಿನ ಎಡನಾಡು ಗ್ರಾಮದ ಪುತ್ತಿಗೆ ಕಟ್ಟದಡ್ಕ ನಿವಾಸಿ ಖಲಂದರ್ ಬಾದಷಾ (30) ಬಂಧಿತ ಆರೋಪಿ.

2009ರಲ್ಲಿ ಪುತ್ತೂರಿನಲ್ಲಿ ನಡೆದಿದ್ದ ವಾಹನ ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದ ಆರೋಪಿಯಾಗಿದ್ದ ಖಲಂದರ್ ಬಾದಷಾ ನ್ಯಾಯಾಲಯ ತನಿಖೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತ ಶನಿವಾರ ಪುತ್ತೂರು ನಗರದ ಹೊರವಲಯದಲ್ಲಿರುವ ಮಂಜಲ್ಪಡ್ಪು ಎಂಬಲ್ಲಿ ಇರುವ ಕುರಿತು ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಪುತ್ತೂರು ನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ಗಳಾದ ಪರಮೇಶ್ವರ ,ಜಯರಾಮ್ ಮತ್ತು ಹೋಂಗಾರ್ಡ್ ಲೋಕೇಶ್ ಅವರು ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News