ಶಿವಮೊಗ್ಗ : ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ

Update: 2017-07-23 13:28 GMT

ಶಿವಮೊಗ್ಗ, ಜು. 23: ನಗರದ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಭಾನುವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಗೌರವಕ್ಕೆ ಪಾತ್ರರಾದ ಪತ್ರಕರ್ತರನ್ನು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.

ಜೀವಮಾನ ಸಾಧನೆಗಾಗಿ ಭಂಡಿಗಡಿ ನಂಜುಂಡಪ್ಪ, ಟಿ.ಕೆ. ರಮೇಶ್ ಶೆಟ್ಟಿ ಅವರಿಗೆ `ಮಿಂಚು ಶ್ರೀನಿವಾಸ್' ಪ್ರಶಸ್ತಿ ನೀಡಲಾಯಿತು. 'ಅತ್ಯುತ್ತಮ ರಾಜಕೀಯ ವಿಶ್ಲೇಷಣಾ ವರದಿ'ಗಳಿಗಾಗಿ ನೀಡುವ ನಾಗೇಂದ್ರರಾವ್ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ ಬಿ.ರೇಣುಕೇಶ್‍ರವರಿಗೆ ನೀಡಿ ಗೌರವಿಸಲಾಯಿತು.

ಉಳಿದಂತೆ ಗಜೇಂದ್ರ ಕುಡಾಲ್ಕರ್ (ಸಾಂಸ್ಕೃತಿಕ ವರದಿ), ನರಸಿಂಹಸ್ವಾಮಿ (ಮಾನವೀಯ ವರದಿ), ಶಿವಮೊಗ್ಗ ನಂದನ್ (ಅತ್ಯುತ್ತಮ ಛಾಯಾಚಿತ್ರ), ಅನಿಲ್ ಸಾಗರ್ (ಕ್ರೀಡಾ ವರದಿ), ಜಿ.ನಾಗೇಶ್ (ತನಿಖಾ ವರದಿ), ಪುಟ್ಟಪ್ಪ (ದೃಶ್ಯ ಮಾಧ್ಯಮ ವರದಿ), ವಿ.ಟಿ. ಅರುಣ್ (ಪರಿಸರ ವರದಿ) ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ತಲಾ 2 ಸಾವಿರ ನಗದು, ಸ್ಮರಣಿಕೆ ಒಳಗೊಂಡಿತ್ತು.

ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ ಛಾಯಾಗ್ರಾಹಕ ಎಂ.ನಿಗಂಗನಗೌಡ ಹಾಗೂ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗಿಯಾದ ಎಸ್.ಕೆ.ನೃಪತುಂಗ ಅವರನ್ನು ಇದೇ ಸಂದರ್ಭದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಬೆಕ್ಕಿನಕಲ್ಮಠದ ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಸ್ವಾಮೀಜಿ, ಬಸವಕೇಂದ್ರದ ಬಸವಮರುಳಸಿದ್ಧ ಸ್ವಾಮೀಜಿ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ, ಶಾಸಕ ಕೆ.ಬಿ.ಪ್ರಸನ್ನಕುಮಾರ್, ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಜೆಡಿಎಸ್ ಮುಖಂಡ ಎಂ.ಶ್ರೀಕಾಂತ್, ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ,

ಮುಖ್ಯಮಂತ್ರಿ ಮಾಧ್ಯಮ ಸಮನ್ವಯಕಾರ ಕೆ.ವಿ.ಪ್ರಭಾಕರ್, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎನ್.ರಾಜು, ಉಪಾಧ್ಯಕ್ಷ ಶಿವಾನಂದ ತಗಡೂರು, ಸಂಘದ ಅಧ್ಯಕ್ಷ ಎನ್.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ವೈದ್ಯ, ಸಂಘದ ಉಪಾಧ್ಯಕ್ಷ ರವಿ ಬಿದನೂರು, ಕೆ.ವಿ.ಶಿವಕುಮಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News