6 ಕಾಂಗ್ರೆಸ್ ಸಂಸದರು ಸದನದಿಂದ 5 ದಿನಗಳ ಕಾಲ ಅಮಾನತು

Update: 2017-07-24 09:37 GMT

ಹೊಸದಿಲ್ಲಿ, ಜು.24: ಲೋಕಸಭೆಯಲ್ಲಿ ಸ್ಪೀಕರ್ ಮೇಲೆ ಕಾಗದ ಪತ್ರಗಳನ್ನು ತೂರಿದ ಆರೋಪದಲ್ಲಿ ವಿಪಕ್ಷ ಕಾಂಗ್ರೆಸ್ ನ 6 ಮಂದಿ ಸಂಸದರನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಐದು ದಿನಗಳ ಕಾಲ ಸದನದಿಂದ ಅಮಾನತು ಮಾಡಿದ್ದಾರೆ. 

ಕಾಂಗ್ರೆಸ್ ನ ಸದಸ್ಯರಾದ ಗೌರವ ಗೊಗೊಯಿ, ಕೆ.ಸುರೇಶ್, ಅಧೀರ್ ರಾಜನ್ ಚೌಧರಿ, ರಂಜಿತ್ ರಂಜನ್, ಸುಶ್ಮೀತಾ ದೇವಿ ಮತ್ತು ಎಂಕೆ ರಾಘವನ್ ಅಮಾನತುಗೊಂಡವರು.

ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ ಗದ್ದಲವನ್ನುಟು ಮಾಡಿದ ಕಾಂಗ್ರೆಸ್ ಸದಸ್ಯರು ಲೋಕಸಭೆಯ ಸ್ವೀಕರ್ ಸುಮಿತ್ರಾ ಮಹಾಜನ್ ಅವರ ಮೇಲೆ ಕಾಗದ ಪತ್ರಗಳನ್ನು ತೂರಿ ಸದನದ ಕಲಾಪಕ್ಕೆ ಅಡ್ಡಪಡಿಸಿದರೆಂದು ಆರೋಪಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News