ಮಂಗಳಪೇಟೆ: ಸೈಕಲ್ ವಿತರಣೆ ಕಾರ್ಯಕ್ರಮ

Update: 2017-07-24 15:56 GMT

ಮಂಗಳೂರು, ಜು. 24: ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ಕುತ್ತೆತ್ತೂರು ಇಲ್ಲಿನ 23 ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಉಚಿತ ಸೈಕಲ್ ವಿತರಣೆ ಕಾರ್ಯಕ್ರಮವು  ಜು. 24ರಂದು ಕುತ್ತೆತ್ತೂರು ಶಾಲೆಯಲ್ಲಿ ನಡೆಯಿತು.

ಈ ಸಮಾರಂಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಫಿಲೋಮಿನ ಕಾರ್ಯಕ್ರಮವನ್ನು ಸ್ವಾಗತಿಸಿ, ಪೆರ್ಮುದೆ ಗ್ರಾಮ ಪಂಚಾಯತ್ ಸದಸ್ಯ ರಾಮ್ ಪ್ರಸಾದ್ ಪಂಡಿತ್  ಉದ್ಘಾಟನೆ ಮಾಡಿದರು.

 ಈ ಸಂದರ್ಭ ಬಾಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಂ.ಎ. ಹಸನಬ್ಬ, ಬಾಳ ಗ್ರಾಮ ಪಂಚಾಯತ್ ಸದಸ್ಯ ಎಂ.ಸರ್ಫ್ರಾಝ್ ನವಾಝ್, ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಹರಿಣಾಕ್ಷಿ, ಕ್ಲಸ್ಟರ್ ಸಂಪನ್ಮೂಲ ಅಧಿಕಾರಿ ಐರಿನ್ ಹಾಗೂ ಇತರರು ಉಪಸ್ಥಿತರಿದ್ದರು. ಪ್ರೀತಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News