ಕಾಂಗ್ರೆಸ್ ಸೇರಿದ ಬಿಜೆಪಿ ಕಾರ್ಯಕರ್ತರು

Update: 2017-07-27 17:23 GMT

ಚಿಕ್ಕಮಗಳೂರು, ಜು.27: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಕೈಮರ, ಹೊಸಪೇಟೆ ಹಾಗೂ ಎಮ್ಮೆಖಾನ್ ಗ್ರಾಮದ ಸುಮಾರು 25ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದರು.

  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಗೃಹ ಕಛೇರಿಯಲ್ಲಿ ಜಾಗರ ಹೋಬಳಿ ಅಧ್ಯಕ್ಷ ಕೈಮರದ ಕೆ.ಕುಮಾರ್ ಹಾಗೂ ಬ್ಲಾಕ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾಡಿ.ಎಲ್.ವಿಜಯಕುಮಾರ್ ಯುವಕರಿಗೆ ಕಾಂಗ್ರೆಸ್ ಬಾವುಟ ನೀಡುವ ಮೂಲಕ  ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡರು.

ಪಕ್ಷಕ್ಕೆ  ಸೇರ್ಪಡೆಗೊಂಡ ಕಾರ್ಯಕರ್ತರು ಬಿಜೆಪಿಯ ಸರ್ವಾಧಿಕಾರಿ ಧೋರಣೆಯಿಂದ ಬೇಸತ್ತು, ರಾಜ್ಯದಲ್ಲಿ ಸಿದ್ದರಾಮಯ್ಯನವರ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ನಾವುಗಳು ಕಾಂಗ್ರೆಸ್ ಪಕ್ಷ ಸೇರುತ್ತಿರುವುದಾಗಿ ಘೋಷಿಸಿಕೊಂಡರು. 

ಈ ಸಂಧರ್ಭದಲ್ಲಿ ಪಂಚಾಯತ್‍ರಾಜ್ ಸಂಘಟನೆಯ ರಾಜ್ಯ ಸಂಚಾಲಕ ಬಿ.ಎಂ.ಸಂದೀಪ್, ಜಿಲ್ಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ವಿ.ಶಿವಕುಮಾರ್, ಬ್ಲಾಕ್ ಕಾಂಗ್ರೆಸ್ ವಕ್ತಾರ ರೂಬಿನ್ ಮೊಸೆಸ್, ಪ್ರಧಾನ ಕಾರ್ಯದರ್ಶಿಗಳಾದ ಸಿಲ್ವಸ್ಟರ್ ಸಿಲ್ಲು, ವೆಂಕಟೇಶ್, ಬಿ.ಎಂ.ಸಂದೇಶ್ ಹಾಗೂ ಯುವ ಕಾಂಗ್ರೆಸ್ ಮುಖಂಡರಾದ ಕೌಶಿಕ್, ಕಾರ್ತಿಕ್ ಚೆಟ್ಟಿಯಾರ್ ಮುಂತಾದವರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News