ಕೇರಳದ ಬಿಜೆಪಿ ಕಚೇರಿ ಮೇಲೆ ದಾಳಿ
Update: 2017-07-28 04:51 GMT
ತಿರುವನಂತಪುರ, ಜು.28: ಕೇರಳದ ರಾಜಧಾನಿ ತಿರುವನಂತಪುರದಲ್ಲಿರುವ ಬಿಜೆಪಿ ಕಚೇರಿ ಮೇಲೆ ದುರ್ಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಬಿಜಪಿ ಕಚೇರಿ ಮೇಲೆ ನಡೆದ ದಾಳಿಯಲ್ಲಿ ಸಿಪಿಐಎಂ ಕಾರ್ಯಕರ್ತರ ಕೈವಾಡವಿದೆಯೆಂದು ಎಂದು ಆರೋಪಿಸಲಾಗಿದೆ
ಕೆಲವು ಮಂದಿ ನಡೆಸಿದ ಕಲ್ಲು ತೂರಾಟದಿಂದಾಗಿ ಕಚೇರಿಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಗೆ ಹಾನಿಯಾಗಿದೆ.
ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಕೆ. ರಾಜಶೇಖರನ್ ಅವರು ಕಚೇರಿಯಲ್ಲಿದ್ದರು ಎಂದು ಹೇಳಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯಿಂದ ಬಿಜೆಪಿ ರಾಜ್ಯಾಧ್ಯಕ್ಷರ ಕಾರು ಸಹಿತ 6 ವಾಹನಗಳು ಜಖಂಗೊಂಡಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.