ಎಪಿಎಂಸಿ ಕಾರ್ಯದರ್ಶಿಗೆ ಬೀಳ್ಕೊಡುಗೆ

Update: 2017-07-28 13:32 GMT

ಪುತ್ತೂರು, ಜು.28; ಪುತ್ತೂರು ಎಪಿಎಂಸಿಯಲ್ಲಿ ಪ್ರಭಾರ ನೆಲೆಯಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಎಚ್.ಕೆ.ಕೃಷ್ಣಮೂರ್ತಿ ಜು.31ರಂದು ಸರಕಾರಿ ಸೇವೆಯಿಂದ ನಿವೃತ್ತಿ ಹೊಂದಲಿದ್ದು, ಈ ಹಿನ್ನಲೆಯಲ್ಲಿ ಅವರನ್ನು ಪುತ್ತೂರು ಎಪಿಎಂಸಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಿದರು.

ಪುತ್ತೂರು ಎಪಿಎಂಸಿಯ ಸಿಬ್ಬಂದಿಗಳ ಪರವಾಗಿಯೂ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸನ್ಮಾನಿತರಾದ ಕೃಷ್ಣಮೂರ್ತಿ ಕುರಿತು ಪುತ್ತೂರು ಎಪಿಎಂಸಿ ಅಧ್ಯಕ್ಷರಾದ ಬೂಡಿಯಾರ್ ರಾಧಾಕೃಷ್ಣ ರೈ, ಎಪಿಎಂಸಿ ನಿರ್ದೇಶಕರಾದ ಪುಲಸ್ತ್ಯಾ ರೈ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಕರುಣಾಕರ ಗೌಡ, ಸಹಾಯಕ ಮಾರುಕಟ್ಟೆ ಮೇಲ್ವಿಚಾರಕ ರಾಮಚಂದ್ರ ಮಾತನಾಡಿ, ನಿವೃತ್ತ ಬದುಕಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಎಚ್.ಕೆ.ಕೃಷ್ಣಮೂರ್ತಿ ಅವರ ಪತ್ನಿ ಸರ್ವಮಂಗಳಾ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News