ಘನ, ದ್ರವ ತ್ಯಾಜ್ಯ ವಿಲೇವಾರಿ: ಹೊಟೇಲ್ ಮಾಲಕರಿಗೆ ತರಬೇತಿ

Update: 2017-07-28 14:54 GMT

ಉಡುಪಿ, ಜು.28: ಉಡುಪಿ ನಗರಸಭಾ ವ್ಯಾಪ್ತಿಯ ಹೊಟೇಲ್, ಬಾರ್ ಹಾಗೂ ರೆಸ್ಟೋರೆಂಟ್‌ಗಳ ಮಾಲಕರಿಗೆ ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಜು.30ರಂದು ಸಂಜೆ 5  ಗಂಟೆಗೆ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ತರಬೇತಿ ಕಾರ್ಯಕ್ರಮದಲ್ಲಿ ಇಂಡಿಯನ್ ಗ್ರೀನ್ ಸರ್ವೀಸ್‌ನ ಯೋಜನಾ ನಿರ್ದೇಶಕ ಶ್ರೀನಿವಾಸನ್ ವೇಲೂರು ಭಾಗವಹಿಸಿ ಮಾಹಿತಿ ನೀಡಲಿದ್ದು, ಕಾರ್ಯಕ್ರಮದಲ್ಲಿ ಉಡುಪಿಯ ಹೊಟೇಲ್, ಬಾರ್, ರೆಸ್ಟೋರೆಂಟ್‌ಗಳ ಮಾಲಕರು ಕಡ್ಡಾಯವಾಗಿ ಹಾಜರಿರುವಂತೆ ಉಡುಪಿ ನಗರಸಭಾ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News