ಸ್ವಾತಂತ್ರೋತ್ಸವ ಪೂರ್ವಭಾವಿ ಸಭೆ

Update: 2017-07-28 14:57 GMT

 ಉಡುಪಿ, ಜು.28: ಉಡುಪಿ ಬೀಡಿನಗುಡ್ಡೆ ಬಯಲು ರಂಗಮಂದಿರದಲ್ಲಿ ಆ.15ರಂದು ನಡೆಯುವ ಜಿಲ್ಲಾ ಮಟ್ಟದ ಸ್ವಾತಂತ್ರೋತ್ಸವ ಸಮಾರಂಭವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಅಪರ ಜಿಲ್ಲಾಧಿಕಾರಿ ಅನುರಾಧ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಯಿತು.

ಗೊಂದಲಗಳಿಲ್ಲದೆ ಸಮನ್ವಯದಿಂದ ಆಚರಿಸಲು ವಿವಿಧ ಸಮಿತಿ ಗಳನ್ನು ರಚಿಸಿ ಹೊಣೆ ಹಂಚಿಕೆ ಮಾಡಲಾಯಿತು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಪಥಸಂಚಲನ ಪೂರ್ವಾಭ್ಯಾಸ, ವಿದ್ಯಾರ್ಥಿಗಳಿಗೆ ಸನ್ಮಾನ, ಜೀವ ರಕ್ಷಕ ಪ್ರಶಸ್ತಿ ನೀಡುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News