ಶೀಘ್ರದಲ್ಲೇ ಕೇಂದ್ರ ಸಚಿವ ಸಂಪುಟ ವಿಸ್ತರಣೆ; ಎಐಎಡಿಎಂಕೆಗೆ ಸ್ಥಾನ ?

Update: 2017-07-31 06:12 GMT

     ಹೊಸದಿಲ್ಲಿ, ಜು.31: ಕೇಂದ್ರದ ಅಧಿಕಾರರೂಢ ಬಿಜೆಪಿ ನೇತೃತ್ವದ ಎನ್‌ಡಿಎ ‘ಆಪರೇಶನ್ ಕಮಲ’ ಮೂಲಕ ಬಿಹಾರದಲ್ಲಿ ಜೆಡಿಯು ಜೊತೆ ಕೈಜೋಡಿಸಿ ಸರಕಾರ ರಚಿಸಿದ ಬಳಿಕ ಇದೀಗ ತಮಿಳುನಾಡಿನ ಎಐಎಡಿಎಂಕೆಯನ್ನು ತನ್ನ ತೆಕ್ಕೆಗೆ ಸೆಳೆಯಲು ಮುಂದಾಗಿದೆ.

ತಮಿಳುನಾಡಿನ ಎಐಎಡಿಎಂಕೆಯನ್ನು ಎನ್‌ಡಿಎ ತೆಕ್ಕೆಗೆ ಸೆಳೆದುಕೊಂಡು ಎಐಎಡಿಎಂಕೆ ಸಂಸದರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ನೀಡುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿದಿದೆ ಎಂದು ತಿಳಿದು ಬಂದಿದೆ.

ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಇನ್ನಷ್ಟು ಬಲಪಡಿಸಲು ಎನ್ ಡಿಎ ನಾಯಕರು  ಯೋಚಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಗುಜರಾತ್‌ನಲ್ಲಿ ಆಪರೇಶನ್ ಕಮಲಕ್ಕೆ ಸಿಲುಕಿ ಬಿಜೆಪಿ ಪಾಳಯಕ್ಕೆ ಜಿಗಿಯುತ್ತಿರುವ ಕಾಂಗ್ರೆಸ್ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ಭಾರೀ ಕಸರತ್ತು ನಡೆಸಿದೆ. ಗುಜರಾತ್‌ನ ಶಾಸಕರನ್ನು ಈಗಾಗಲೇ ಪಕ್ಷದ ಹೈಕಮಾಂಡ್ ಬೆಂಗಳೂರಿನ  ಈಗಲ್‌ಟನ್ ರೆಸಾರ್ಟ್‌ಗೆ ರವಾನಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News