ಸುನೀಲ್‌ಕುಮಾರ್ ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತ

Update: 2017-07-31 15:32 GMT

ಬೆಂಗಳೂರು, ಜು.31: ರಾಜ್ಯ ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಟಿ.ಸುನೀಲ್‌ಕುಮಾರ್‌ರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರವು ಸೋಮವಾರ ಆದೇಶ ಹೊರಡಿಸಿದೆ.

ನಗರ ಪೊಲೀಸ್ ಆಯುಕ್ತರಾಗಿದ್ದ ಪ್ರವೀಣ್‌ಸೂದ್‌ರನ್ನು ಸಂವಹನ ಹಾಗೂ ಆಧುನೀಕರಣ ವಿಭಾಗದ ಎಡಿಜಿಪಿಯನ್ನಾಗಿ ಹಾಗೂ ಅಶಿತ್ ಮೋಹನ್ ಪ್ರಸಾದ್‌ರನ್ನು ಗುಪ್ತಚರ ವಿಭಾಗದ ಮಹಾನಿರ್ದೇಶರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News