ನನ್ನ ಮನೆ ಮೇಲೂ ದಾಳಿ ನಡೆಸುವಂತೆ ಒತ್ತಡ ಹೇರಲಾಗಿದೆ: ಸಚಿವ ಎಂ.ಬಿ.ಪಾಟೀಲ್

Update: 2017-08-02 08:46 GMT

ಬೆಂಗಳೂರು, ಆ.2: "ಸದ್ಯದಲ್ಲೇ ನನ್ನ ಮನೆ ಮೇಲೂ ದಾಳಿ ನಡೆಸುವಂತೆ ಒತ್ತಡ ಹೇರಲಾಗಿದೆ ಎನ್ನುವ ಮಾಹಿತಿ ಬಿಜೆಪಿ ಮೂಲದಿಂದಲೇ ನನಗೆ ಸಿಕ್ಕಿದೆ. ಬಿಜೆಪಿ ರಾಜ್ಯ ಮುಖಂಡರು ನನ್ನ ಮನೆ ಮೇಲೂ ದಾಳಿ ನಡೆಸುವಂತೆ ಒತ್ತಡ ಹೇರಿದ್ದಾರೆಂದು ತಿಳಿದು ಬಂದಿದೆ" ಎಂದು ನೀರಾವರಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

"ರಾಜಕೀಯವಾಗಿ ಬಿಜೆಪಿ ನನ್ನನ್ನು ಟಾರ್ಗೆಟ್ ಮಾಡುತ್ತಿದೆ. ಆದಾಯ ತೆರಿಗೆ ಇಲಾಖೆ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಬೇಕು. ರಾಜಕೀಯಕ್ಕಾಗಿ ಆದಾಯ ತೆರಿಗೆ ಇಲಾಖೆಯನ್ನು ಬಳಸಿಕೊಳ್ಳಲಾಗುತ್ತಿದೆ. ನನಗೆ ಮಾಹಿತಿ ನೀಡಿರುವ ಬಿಜೆಪಿ ಮೂಲವನ್ನು ನಾನು ಬಹಿರಂಗಪಡಿಸಬಹುದು. ಆದರೆ ಅವರ ವಿಶ್ವಾಸ ಕಳೆದುಕೊಳ್ಳಲು ಇಷ್ಟ ಇಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News