×
Ad

ಪ್ರತಿಪಕ್ಷದ ಅಪಪ್ರಚಾರವನ್ನು ವಿಫಲಗೊಳಿಸಬೇಕಿದೆ: ಸಚಿವ ಖಾದರ್

Update: 2017-08-05 20:00 IST

ಮಂಗಳೂರು, ಆ.5 : ಅಭಿವೃದ್ದಿ ಪರ ಆಡಳಿತ ನೀಡುತ್ತಿರುವ ಕಾಂಗ್ರೆಸ್ ಸರಕಾರದ ಮೇಲೆ ಕಳಂಕ ತರಲು ಪ್ರತಿಪಕ್ಷ ಬಿಜೆಪಿ ಪ್ರಯತ್ನಿಸುತ್ತಿದೆ. ಆದ್ದರಿಂದ ವಿಪಕ್ಷಗಳ ಅಪಪ್ರಚಾರಗಳನ್ನು ವಿಫಲಗೊಳಿಸುವ ಕಾರ್ಯವನ್ನು ಕಾರ್ಯಕರ್ತರು ಸಮರ್ಥವಾಗಿ ನಿಭಾಯಿಸಬೇಕು ಎಂದು ರಾಜ್ಯದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಕರೆ ನೀಡಿದ್ದಾರೆ.

ಅವರು ಇಂದು ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷದ ಜಿಲ್ಲಾ ಘಟಕದ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಪ್ರತಿಪಕ್ಷದ ಪಿತೂರಿ, ಅಪಪ್ರಚಾರಕ್ಕೆ ರಾಜ್ಯದ ಇಂಧನ ಸಚಿವ ಡಿಕೆಶಿ ಅವರ ಮೇಲಿನ ಐಟಿ ದಾಳಿ ಪ್ರಮುಖ ನಿದರ್ಶನವಾಗಿದೆ. ಇಂತಹ ಹುನ್ನಾರಗಳನ್ನು ವಿಲಗೊಳಿಸುವ ಕಾರ್ಯವನ್ನು ಕಾರ್ಯಕರ್ತರು ಸಮರ್ಥ ರೀತಿಯಲ್ಲಿ ಮಾಡಬೇಕು. ತಳಮಟ್ಟದಿಂದಲೇ ಒಗ್ಗಟಿನಿಂದ ಕಾರ್ಯನಿರ್ವಹಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ದಕ್ಷ ,ಭ್ರಷ್ಟಚಾರರಹಿತ ಹಾಗೂ ಜನಪರ ಆಡಳಿತ ನೀಡಿ ಜನಮೆಚ್ಚುಗೆಗೆ ಪಾತ್ರವಾಗಿರುವ ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೇರಿಸುವಲ್ಲಿ ಕಾರ್ಯಕರ್ತರು, ಪದಾಧಿಕಾರಿಗಳು ಸೇರಿದಂತೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕಾಗಿದೆ ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ಸ್ವಾಗತಿಸಿ ಚುನಾವಣೆಗೆ ಇನ್ನೂ ಕೆಲವೇ ತಿಂಗಳು ಬಾಕಿಯುಳಿದಿವೆ. ಪಕ್ಷದ ಎಲ್ಲಾ ಬ್ಲಾಕ್‌ಗಳ, ಘಟಕಗಳು, ಬೂತ್‌ಗಳ ಪದಾಧಿಕಾರಿಗಳು, ಕಾರ್ಯಕರ್ತರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ದ.ಕ.ಜಿಲ್ಲಾ ಉಸ್ತುವಾರಿ ಯು.ಬಿ.ವೆಂಕಟೇಶ್, ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರ ಉಸ್ತುವಾರಿಗಳಾದ ಅರುಣ್ ಮಾಚಯ್ಯ, ರಾಜ್ ಕುಮಾರ್, ಸವಿತಾ ರಮೇಶ್, ಐವನ್ ನಿಗ್ಲಿ , ವಿಧಾನಪರಿಷತ್ ಚುನಾವಣೆ ಅಭ್ಯರ್ಥಿ ಎಸ್.ಪಿ.ದಿನೇಶ್, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ, ಮೇಯರ್ ಕವಿತಾ ಸನಿಲ್, ಮೂಡಾ ಅಧ್ಯಕ್ಷ ಸುರೇಶ್ ಬಳ್ಳಾಲ್, ಗೇರು ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಮೂಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಮುಖಂಡರಾದ ಬಿ.ಇಬ್ರಾಹಿಂ, ಕಳ್ಳಿಗೆ ತಾರನಾಥ ಶೆಟ್ಟಿ, ಬಲರಾಜ ರೈ, ಶಶಿಧರ ಹೆಗ್ಡೆ , ಮಮತಾ ಗಟ್ಟಿ , ಶಾಲೆಟ್‌ಪಿಂಟೋ, ನವೀನ್ ಡಿಸೋಜ, ಸಂತೋಷ್ ಕುಮಾರ್ ಶೆಟ್ಟಿ , ಎಂ.ಎಸ್.ಮಹಮ್ಮದ್, ಸದಾಶಿವ ಉಳ್ಳಾಲ್, ಶೇಖರ್ ಕುಕ್ಕೇಡಿ, ನಜೀರ್ ಬಜಾಲ್, ಸೇವಾದಳದ ಅಶ್ರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News