ಸರಕಾರಿ ನೌಕರರಿಂದ ಸಮಯ ಪಾಲನೆ, ಶಿಸ್ತಿಗೆ ಆದ್ಯತೆ: ವೆಂಕಟೇಶ್ ನಾಯ್ಕ
ಉಡುಪಿ, ಆ.6: ಸರಕಾರಿ ನೌಕರರು ಸಮಯ ಪಾಲನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಸ್ತಿನಿಂದ ಕರ್ತವ್ಯ ನಿರ್ವಹಿಸಬೇಕು. ಅಶಿಸ್ತಿನೊಂದಿಗೆ ಯಾವುದೇ ಸಂದರ್ಭ ದಲ್ಲಿ ರಾಜಿ ಮಾಡಿಕೊಳ್ಳಬಾರದು ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೆಂಕಟೇಶ್ ನಾಯ್ಕ ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯ ಹಾಗೂ ವಕೀಲರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ನ್ಯಾಯಾ ಲಯಗಳ ಸಂಕೀರ್ಣದದಲ್ಲಿ ರವಿವಾರ ಆಯೋಜಿಸಲಾದ ಮೂಲ ಭೂತ ಕರ್ತವ್ಯಗಳು, ಸರಕಾರಿ ನೌಕರರ ಜವಾಬ್ದಾರಿಗಳು, ದೈನಂದಿನ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಸರಕಾರಿ ನೌಕರರು ಎದುರಿಸಬೇಕಾದ ಸಮಸ್ಯೆಗಳು ಹಾಗೂ ಪರಿಹಾರ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಯಾವುದೇ ಕೆಲಸದಲ್ಲಿ ಹೆಚ್ಚಿನ ಅನುಭವಗಳಿಸುವುದರಿಂದ ಕಾರ್ಯ ನಿರ್ವ ಹಣೆಯಲ್ಲಿ ದಕ್ಷತೆ ಹೆಚ್ಚಾಗಲಿದ್ದು, ಜ್ಞಾನ ವೃದ್ದಿಯಾಗುತ್ತದೆ. ಈ ನಿಟ್ಟಿನಲ್ಲಿ ತರಬೇತಿಗಳು ಹೆಚ್ಚಿನ ಅನುಭವಗಳನ್ನು ನೀಡುತ್ತವೆ. ಕಾಲಕಾಲಕ್ಕೆ ನೀಡುವ ತರಬೇತಿಗಳಿಂದ ನೌಕರರಲ್ಲಿ ಕಾರ್ಯ ಕ್ಷಮತೆ ಹೆಚ್ಚಾಗುತ್ತದೆ. ಇದರಿಂದ ಹೊಸ ದಾಗಿ ನೇಮಕಗೊಂಡ ನೌಕರರಿಗೆ ಉತ್ತಮ ತರಬೇತಿ ೊರೆಯಲಿದೆ ಎಂದು ಅವರು ತಿಳಿಸಿದರು.
ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ ವಹಿಸಿದ್ದರು. ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪ್ರಕಾಶ್, ಹಿರಿಯ ಸಿವಿಲ್ ನ್ಯಾಯಧೀಶೆ ಲತಾ, ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಡಿ.ವಿ.ಹೆಗ್ಡೆ, ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿ ಕಾರಿ ವಿಜಯಲಕ್ಷ್ಮಿ ಉಪಸ್ಥಿತರಿದ್ದರು. ಶಿರಸ್ತೆದಾರ್ ಶಿವಪ್ಪ ಸ್ವಾಗತಿಸಿದರು.
ಗುರಿ ಮೀರಿದ ಸಾಧನೆ: ಉಡುಪಿ ಪ್ರಥಮ
ಇಡೀ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ಉಡುಪಿ ಜಿಲ್ಲೆಯಲ್ಲಿ ಶೀಘ್ರವಾಗಿ ವಿಲೇವಾರಿ ಮಾಡಲಾಗುತ್ತಿದ್ದು, ಉಚ್ಛ ನ್ಯಾಯಾಯಲವು ಜಿಲ್ಲಾ ನ್ಯಾಯಾಲಯಗಳಿಗೆ ನಿಗಧಿಗೊಳಿಸಿರುವ 10 ಗುರಿಯ ಪ್ರಮಾಣದ ಬದಲು ಉಡುಪಿಯಲ್ಲಿ 16 ಪ್ರಮಾಣದಲ್ಲಿ ಕಾರ್ಯ ಸಾಧನೆ ಮಾಡಲಾಗುತ್ತಿದೆ. ಈ ಮೂಲಕ ಉಡುಪಿ ಇಡೀ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಜಡ್ಜ್ ಮೆಂಟ್ಗಳ ಅಪ್ ಲೋಡಿಂಗ್ ಹಾಗೂ ಅನ್ ಡೀಡ್ ಕೇಸ್ನಲ್ಲಿಯೂ ಸಹ ಉಡುಪಿ ಪ್ರಥಮ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ 13 ಜನ ನ್ಯಾಯಾಧೀಶರಿದ್ದು, 20 ಮಂದಿಯ ಕಾರ್ಯಗಳನ್ನು ಅವರು ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೆಂಕಟೇಶ್ ನಾಯ್ಕ ತಿಳಿಸಿದರು.