ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

Update: 2017-08-06 15:16 GMT

ಚಿಕ್ಕಬಳ್ಳಾಪುರ, ಆ. 6: ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ನವ್ಯಾ(17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯಾಗಿದ್ದು, ಮಂಜುನಾಥ್, ಸರೋಜಮ್ಮ ದಂಪತಿ ಪುತ್ರಿಯಾದ ನವ್ಯಾ ಬೆಸ್ಟ್ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. 

ಶನಿವಾರ ಬೆಳಗ್ಗೆ ತಾಯಿ ಸರೋಜಮ್ಮ ತನ್ನ ಸಹೋದರನ ಮನೆಗೆ ತೆರಳಿದ್ದಾಗ, ಮನೆ ಬಾಗಿಲು ಹಾಕಿ, ಸೀರೆಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಮಧ್ಯಾಹ್ನ ಬಳಿಕ ತಾಯಿ ಭೇಟಿ ನೀಡಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News