ಮರದ ಕೊಂಬೆ ಕಡಿಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶ: ಓರ್ವ ಮೃತ್ಯು

Update: 2017-08-07 09:34 GMT

ಸಕಲೇಶಪುರ, ಆ.7: ಮರದ ಕೊಂಬೆ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಕ್ಕೊಳಗಾಗಿ ಓರ್ವ ಮೃತಪಟ್ಟ ಘಟನೆ ತಾಲೂಕಿನ ಕಾಮನಹಳ್ಳಿಯಲ್ಲಿ ಇಂದು ನಡೆದಿದೆ.

ಕಸಬಾ ಹೋಬಳಿ ನಡಹಳ್ಳಿ ಗ್ರಾಮದ ತಮಯ್ಯ(58) ಮೃತಪಟ್ಟವರಾಗಿದ್ದಾರೆ. ಇವರು ಕಾಮನಹಳ್ಳಿ ಗ್ರಾಮದ ವಿರೇಶ್ ಎಂಬವರ ತೋಟದಲ್ಲಿ ಮರದ ಕೊಂಬೆ ಕಡಿಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News