ಬಿಜೆಪಿ ನಿಯೋಗದಿಂದ ಚುನಾವಣಾ ಆಯೋಗದ ಅಧಿಕಾರಿಗಳ ಭೇಟಿ

Update: 2017-08-08 14:33 GMT

ಹೊಸದಿಲ್ಲಿ, ಆ.8: ಗುಜರಾತ್ ನಲ್ಲಿ   ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದರೆನ್ನಲಾದ ಇಬ್ಬರು ಶಾಸಕರ ಮತಗಳನ್ನು ರದ್ಧುಗೊಳಿಸುವಂತೆ  ಕಾಂಗ್ರೆಸ್‌ ಮಾಡಿರುವ ಮನವಿಯನ್ನು ತಿರಸ್ಕರಿಸುವಂತೆ ಬಿಜೆಪಿ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ದಿಲ್ಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿರುವ ಬಿಜೆಪಿಯ ನಿಯೋಗವು ಕಾಂಗ್ರೆಸ್ ಪಕ್ಷದ ಆರೋಪಗಳು ಸತ್ಯಕ್ಕೆ ದೂರವಾಗಿದ್ದು,ಅವರ ಮನವಿಯನ್ನು ತಿರಸ್ಕರಿಸಿ, ಮತ ಎಣಿಕೆಯನ್ನು ಪ್ರಾರಂಭಿಸುವಂತೆ ಬಿಜೆಪಿ ಮನವಿ ಮಾಡಿದೆ ಎಂದು ಸಚಿವ ರವಿಶಂಕರ ಪ್ರಸಾದ್ ತಿಳಿಸಿದ್ದಾರೆ.

 ಗುಜರಾತ್‌ನಲ್ಲಿ ರಾಜ್ಯಸಭೆಯ ಮೂರು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿರುವ ಇಬ್ಬರು ಶಾಸಕರಾದ ಬೋಲಾಭಾಯ್ ಗೋಯಲ್ ಮತ್ತು ರಾಘವಭಾಯ್ ಪಟೇಲ್ ಮತವನ್ನು ರದ್ಧು ಪಡಿಸುವಂತೆ ಕಾಂಗ್ರೆಸ್ ಚುನಾವಣಾ ಆಯೋಗವನ್ನು ಕಾಂಗ್ರೆಸ್ ಒತ್ತಾಯಿಸಿದ ಬೆನ್ನಲ್ಲೇ ಬಿಜೆಪಿ ಚುನಾವಣಾ ಆಯೋಗದ ಕಚೇರಿಗೆ ತೆರಳಿದೆ.

,,,,,,,,,,,,,,,

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News