ಕುಮಾರ ಸ್ವಾಮಿ

Update: 2017-08-09 11:54 GMT

ಮೂಡುಬಿದಿರೆ, ಆ. 9: ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಮಾಜಿ ಅಧ್ಯಕ್ಷ, ವಿಶ್ರಾಂತ ಶಿಕ್ಷಕ ಕುಮಾರ ಸ್ವಾಮಿ (62) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹೊಂದಿದರು.

ಅವರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಮೂಲತಃ ಮಂಗಳೂರಿನ ಮೂಡುಶೆಡ್ಡೆಯವರಾದ ಕುಮಾರ ಸ್ವಾಮಿ 1985 ರಲ್ಲಿ ಶಿಕ್ಷಕರಾಗಿ ಗಾಜಿಗಾರಪಲ್ಕೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 23 ವರ್ಷ ಸೇವೆ ಸಲ್ಲಿಸಿದ್ದರು. ಬಳಿಕ ಪೆರಿಬೆಟ್ಟು ವಾಲ್ಪಾಡಿ ಪ್ರಾಥಮಿಕ ಶಾಲೆಯಲ್ಲಿ 2013ರವರೆಗೆ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದಿದ್ದರು.

ತಮ್ಮ ಸೇವಾವಧಿಯಲ್ಲಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದ ಕುಮಾರ ಸ್ವಾಮಿ ಮೂಡುಬಿದಿರೆ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಸುಮಾರು 10 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಲಯನ್ಸ್ ಕ್ಲಬ್ ಸದಸ್ಯರಾಗಿ, ಮೂಡುಬಿದಿರೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ