ಕಾರ್ಯದರ್ಶಿಯಾಗಿ ಕೆ.ಪಳನಿವೇಲು ನೇಮಕ
Update: 2017-08-10 18:36 IST
ಬೆಂಗಳೂರು, ಆ. 10: ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಾಲಯ ಕಾರ್ಯದರ್ಶಿಯನ್ನಾಗಿ ಭಾರತಿನಗರದ ಕೆ.ಪಳನಿವೇಲು ಅವರನ್ನು ನೇಮಕ ಮಾಡಿ ಮೋರ್ಚಾ ರಾಜ್ಯಾಧ್ಯಕ್ಷ ಡಿ.ಎಸ್.ವೀರಯ್ಯ ಆದೇಶ ಹೊರಡಿಸಿದ್ದಾರೆ.
ಎಲ್ಲರ ಸಹಕಾರದಿಂದ ಪಕ್ಷವನ್ನು ತಳಮಟ್ಟದಿಂದ ಸಂಘಟಿತವಾಗಿ ಸರ್ವತೋಮುಖ ಬೆಳವಣಿಗೆ ಹೊಂದುವ ನಿಟ್ಟಿನಲ್ಲಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಅವರು ಪ್ರಕಟಣೆಯಲ್ಲಿ ಸೂಚನೆ ನೀಡಿದ್ದಾರೆ.