ಅಕ್ರಮ ಮರಳು ಸಾಗಾಟ ಆರೋಪ: ಲಾರಿಗಳು ವಶ

Update: 2017-08-10 16:14 GMT

ಉಳ್ಳಾಲ, ಆ. 10: ಕೇರಳ ಕರ್ನಾಟಕದ ಗಡಿ ಭಾಗ, ತಲಪಾಡಿ ಬಳಿ ಅಕ್ರಮವಾಗಿ ಕೇರಳಕ್ಕೆ ಮರಳು ಸಾಗಾಟ ಮಾಡುತ್ತಿದ್ದ 6 ಲಾರಿಗಳನ್ನು ಎಸಿಪಿ ರಾಮರಾವ್ ಗುರುವಾರ ದಾಳಿ ನಡೆಸಿ ವಶಕ್ಕೆ ಪಡೆದಿದ್ದು, 8 ಮಂದಿಯನ್ನು ಬಂಧಿಸಿದ್ದಾರೆ.

ತಲಪಾಡಿಯಲ್ಲಿ ಅವ್ಯಾಹತವಾಗಿ ಅಕ್ರಮ ಮರಳು ಸಾಗಾಟ ನಡೆಯುತ್ತಿದ್ದು ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ರಾಮರಾವ್ ಅವರು ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ 10 ಚಕ್ರದ ಮೂರು ಟ್ರಕ್ ಗಳು ಮತ್ತು ಮೂರು ಟಿಪ್ಪರ್‌ಗಳನ್ನು ವಶಕ್ಕೆ ಪಡೆದಿದ್ದು, ಲಾರಿಯಲ್ಲಿದ್ದ 8 ಮಂದಿಯನ್ನು ಬಂಧಿಸಿದ್ದು ಒಟ್ಟು ಇಪ್ಪತ್ತು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಉಳ್ಳಾಲ ಇನ್ಸ್‌ಪೆಕ್ಟರ್ ಗೋಪಿಕೃಷ್ಣ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News