ಮೂರನೆ ಟೆಸ್ಟ್; ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

Update: 2017-08-12 04:23 GMT

ಪಲ್ಲೆಕೆಲೆ, ಆ.12: ಶ್ರೀಲಂಕಾ ವಿರುದ್ಧದ ಮೂರನೆ ಹಾಗೂ ಅಂತಿಮ ಕ್ರಿಕೆಟ್ ಟೆಸ್ಟ್ ನಲ್ಲಿ ಟಾಸ್ ಜಯಿಸಿದ ಭಾರತ ಬ್ಯಾಟಿಂಗ್ ಆಯ್ದುಕೊಂಡಿದೆ.

ಒಂದು ಟೆಸ್ಟ್  ಪಂದ್ಯಕ್ಕೆ ಅಮಾನತುಗೊಂಡಿರುವ ಆಲ್ ರೌಂಡರ್ ರವೀಂದ್ರ ಜಡೇಜ ಬದಲಿಗೆ ಸ್ಪಿನ್ನರ್ ಕುಲದೀಪ್ ಯಾದವ್ ಗೆ ಸ್ಥಾನ ನೀಡಲಾಗಿದೆ.

ಭಾರತ ಈಗಾಗಲೇ ಮೂರು ಟೆಸ್ಟ್ ಗಳ ಸರಣಿಯಲ್ಲಿ 2 ಟೆಸ್ಟ್ ಗಳನ್ನು ಗೆದ್ದುಕೊಂಡು ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಂಡಿದೆ. ಕ್ಲೀನ್ ಸ್ವೀಪ್ ಕಡೆಗೆ ಕಣ್ಣಿಟ್ಟಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News