ಆಗಸ್ಟ್ 15 ಆಳ್ವಾಸ್‍ನಲ್ಲಿ ಸ್ವಾತಂತ್ರ್ಯ ಸಂಭ್ರಮ

Update: 2017-08-13 12:22 GMT

ಮೂಡುಬಿದಿರೆ,ಆ.13: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ 26 ಸಾವಿರ ವಿದ್ಯಾರ್ಥಿಗಳು, ಸಂಸ್ಥೆಯ ಸಿಬ್ಬಂದಿವರ್ಗ, ವಿದ್ಯಾರ್ಥಿ ಪಾಲಕರು ಮತ್ತು ಸಾರ್ವಜನಿಕರ ಸಮ್ಮುಖದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಆಗಸ್ಟ್ 15ರಂದು ಬೆಳಗ್ಗೆ 9ಗಂಟೆಗೆ ಪುತ್ತಿಗೆ ಪದವಿನಲ್ಲಿರುವ ಕೆ.ಶ್ರೀಪತಿ ಭಟ್ ಬಯಲು ರಂಗ ಮಂಟಪದಲ್ಲಿ ನಡೆಯಲಿದೆ.

ನಿಟ್ಟೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ವಿನಯ ಹೆಗ್ಡೆ, ಮೂಡುಬಿದಿರೆ ಶಾಸಕ ಕೆ.ಅಭಯಚಂದ್ರ ಜೈನ್, ಅಬುದಾಬಿಯ ಎನ್‍ಎಂಸಿ, ಯುಎಇ ಎಕ್ಸ್‍ಚೆಂಜ್ ಸಂಸ್ಥೆಗಳ ಸಿಇಒ ಡಾ.ಬಿ.ಆರ್ ಶೆಟ್ಟಿ ಮುಖ್ಯ ಉಪಸ್ಥಿತರಿರುವರು.  
ಯುಪಿಎಸ್‍ಸಿ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್ ಪಡೆದ ನಂದಿನಿ ಕೆ.ಆರ್, ಪಿಯುಸಿ ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಸ್ಥಾನ ಪಡೆದ ವಿ.ಸ್ಪಂದನ, ಸಿಎ-ಸಿಪಿಟಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ, ದೇಶಕ್ಕೆ ದ್ವಿತೀಯ ಸ್ಥಾನ ಪಡೆದ ತವಿಷಿ ದೇಚಮ್ಮ ಅವರಿಗೆ ಸನ್ಮಾನ ಮಾಡಲಾಗುವುದೆಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News