ಸರಗಳ್ಳತನ

Update: 2017-08-13 14:04 GMT

ಬೆಂಗಳೂರು, ಆ.13: ನಗರ ವ್ಯಾಪ್ತಿ ಎರಡು ಕಡೆ ಸರಗಳ್ಳತನ ಪ್ರಕರಣಗಳು ಬೆಳಕಿಗೆ ಬಂದಿವೆ.

ಬಸವೇಶ್ವರನಗರದ ಸತ್ಯನಾರಾಯಣ ಲೇಔಟ್ ನಿವಾಸಿ ಪ್ರಭಾ ಎಂಬುವರು ಕುರುಬರಹಳ್ಳಿ ವೃತ್ತದಲ್ಲಿ ಶನಿವಾರ ರಾತ್ರಿ 7:50 ಸುಮಾರಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂಬಾಲಿಸಿ ಬಂದ ದುಷ್ಕರ್ಮಿಗಳು 60 ಗ್ರಾಂ ಚಿನ್ನದ ಸರ ಕದ್ದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

ಅದೇ ರೀತಿ, ಮಲ್ಲೇಶ್ವರ ವೆಸ್ಟ್‌ನ 8ನೆ ಎ ಮೈನ್ ಮಿಲ್ಕ್ ಕಾಲೋನಿ ನಿವಾಸಿ ವಿಜಯಾ ಎಂಬುವರು ರಾತ್ರಿ 8 ಗಂಟೆ ಸುಮಾರಿಗೆ ತರಕಾರಿ ತೆಗೆದುಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಬೈಕ್‌ನಲ್ಲಿದ್ದ ದುಷ್ಕರ್ಮಿಗಳು ಕತ್ತಿನಲ್ಲಿದ್ದ ಚಿನ್ನದ ಸರ ಕದ್ದು ಪರಾರಿಯಾಗಿದ್ದಾರೆ. ಈ ಸಂಬಂದ ದೂರು ದಾಖಲಿಸಿಕೊಂಡಿರುವ ಸುಬ್ರಹ್ಮಣ್ಯ ನಗರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News