ವಿಷ ಸೇವಿಸಿ ಆತ್ಮಹತ್ಯೆ

Update: 2017-08-13 16:06 GMT

ಮಂಗಳೂರು, ಆ. 13: ಹಲವು ಸಮಯದಿಂದ ಅಸೌಖ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ರವಿವಾರ ವಿಷ ಸೇವಿಸಿದ್ದು, ಚಿಕಿತ್ಸೆ ಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ದೇರೆಬೈಲ್ ಕೊಂಚಾಡಿ ನಿವಾಸಿ ಮಲ್ಲೇಶ್ ವಿ. ಪೈ (50) ಮೃತಪಟ್ಟವರು. ರವಿವಾರ ಮಧ್ಯಾಹ್ನ 1 ಗಂಟೆ ವೇಳೆಗೆ ಇವರು ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದನ್ನು ಕಂಡ ಅವರ ಪತ್ನಿ ಮತ್ತು ಮಗಳು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಪರೀಕ್ಷಿಸಿದ ವೈದ್ಯರು ಮಲ್ಲೇಶ್ ಮೃತಪಟ್ಟಿರುವುದಾಗಿ ಹೇಳಿದ್ದಾರೆ.

ಇವರು 12ವರ್ಷಗಳಿಂದ ಖಾಯಿಲೆಯಿಂದ ಬಳಲುತ್ತಿದ್ದು, ಗುಣಮುಖವಾಗಿರಲಿಲ್ಲ ಎನ್ನಲಾಗಿದೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News