ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ
Update: 2017-08-14 18:11 IST
ಬೆಂಗಳೂರು, ಆ. 14: ಆಡಳಿತದ ಹಿತದೃಷ್ಟಿಯಿಂದ ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.
ಅತುಲ್ಕುಮಾರ್ ತಿವಾರಿ ಜಂಟಿ ಕಾರ್ಯದರ್ಶಿ ಗ್ರಾಮೀಣಾಭಿವೃದ್ಧಿ ಇಲಾಖೆ ಭಾರತ ಸರಕಾರ ಹಾಗೂ ನಿಲಯ ಮಿತಾಶ್-ಹೊಸದಿಲ್ಲಿ ಕರ್ನಾಟಕ ಭವನದ ಪ್ರಾದೇಶಿಕ ಆಯುಕ್ತರನ್ನಾಗಿ ನಿಯೋಜನೆ ಮಾಡಿ ಆದೇಶ ಹೊರಡಿಸಲಾಗಿದೆ.