“ಭಾರತದಂತಹ ದೊಡ್ಡ ದೇಶದಲ್ಲಿ ಇಂತಹ ಅನೇಕ ಘಟನೆಗಳು ನಡೆದಿವೆ, ಇದು ಮೊದಲ ಬಾರಿಯಲ್ಲ”
Update: 2017-08-14 13:10 GMT
ಹೊಸದಿಲ್ಲಿ, ಆ.14: “ರಾಜೀನಾಮೆ ಕೇಳುವುದೇ ಕಾಂಗ್ರೆಸ್ ನ ಕೆಲಸ. ಭಾರತದಂತಹ ದೊಡ್ಡ ದೇಶದಲ್ಲಿ ಈ ಹಿಂದೆಯೂ ಇಂತಹ ಅನೇಕ ಘಟನೆಗಳು ನಡೆದಿವೆ. ಇದು ಮೊದಲ ಬಾರಿಯಲ್ಲ” ಎಂದು ಗೋರಖ್ ಪುರ ದುರಂತಕ್ಕೆ ಸಂಬಂಧಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಮುಖ್ಯಮಂತ್ರಿ ಆದಿತ್ಯನಾಥ್ ರಾಜೀನಾಮೆ ನೀಡಬೇಕೆನ್ನುವ ಕಾಂಗ್ರೆಸ್ ಆಗ್ರಹವನ್ನು ತಿರಸ್ಕರಿಸಿದ ಅವರು, ಭಾರತದಂತಹ ದೊಡ್ಡ ದೇಶದಲ್ಲಿ ಇಂತಹ ಘಟನೆಗಳು ನಡೆಯುತ್ತವೆ ಎಂದರು.
ಆಕ್ಸಿಜನ್ ವ್ಯವಸ್ಥೆ ಸ್ಥಗಿತಗೊಂಡ ಪರಿಣಾಮ ಆಗಸ್ಟ್ 7ರಿಂದ ಗೋರಖ್ ಪುರ ಬಿಆರ್ ಡಿ ಆಸ್ಪತ್ರೆಯಲ್ಲಿ 79 ಮಕ್ಕಳು ಮೃತಪಟ್ಟಿದ್ದಾರೆ. ಈ ನಡುವೆ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಘಟನೆಗೆ ಸಂಬಂಧಿಸಿ ರಾಷ್ಟ್ರೀಯ ಮಾನ ಹಕ್ಕು ಆಯೋಗ ಉತ್ತರ ಪ್ರದೇಶ ಸರಕಾರಕ್ಕೆ ನೋಟಿಸ್ ನೀಡಿದೆ.