ರೋಟರಿಕ್ಲಬ್‌ನಿಂದ ಅಂಗನವಾಡಿ ಪುಟಾಣಿಗಳಿಗೆ ಸಮವಸ್ತ್ರ ವಿತರಣೆ

Update: 2017-08-14 15:55 GMT

ಮೂಡುಬಿದಿರೆ, ಆ.14: ಇಲ್ಲಿನ ರೋಟರಿ ಕ್ಲಬ್ ವತಿಯಿಂದ ಕಲ್ಲಬೆಟ್ಟು ಅಂಗನವಾಡಿ ಕೇಂದ್ರದ ಪುಟಾಣಿಗಳಿಗೆ ಸೋಮವಾರ ಸಮವಸ್ತ್ರವನ್ನು ವಿರಿಸಲಾಯಿತು.

 ರೋಟರಿ ಅಧ್ಯಕ್ಷ ಶ್ರೀಕಾಂತ್ ಕಾಮತ್ =ಪುಟಾಣಿಗಳಿಗೆ ಸಮವಸ್ತ್ರವನ್ನು ವಿತರಿಸಿ ಮಾತನಾಡಿದರು. ಕಲ್ಲಬೆಟ್ಟು ಸರಕಾರಿ ಉನ್ನತೀಕರಿಸಿದ ಶಾಲೆಯ ಮುಖ್ಯ ಶಿಕ್ಷಕ ವಿನಯ ಕುಮಾರ್, ರೋಟರಿ ಸಾರ್ಜೆಂಟ್ ಸುದರ್ಶನ್, ಸದಸ್ಯ ಸುನಿಲ್ ಅತಿಥಿಗಳಾಗಿ ಭಾಗವಹಿಸಿದ್ದರು.

ಅಂಗನವಾಡಿ ಕಾರ್ಯಕರ್ತೆ ರೇಖಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News