×
Ad

​ಕಟ್ಟಡದಿಂದ ಬಿದ್ದ ಗಾಯಾಳು ಮೃತ್ಯು

Update: 2017-08-15 21:46 IST

ಕಾರ್ಕಳ, ಆ.15: ಕುಕ್ಕುಂದೂರು ಗ್ರಾಮದ ಗಣಿತ ನಗರ ಎಂಬಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಹೆಬ್ರಿ ಇಂದಿರಾನಗರದ ನಿವಾಸಿ ಸದಾಶಿವ ಆಚಾರ್ಯ(46) ಎಂದು ಗುರುತಿಸಲಾಗಿದೆ.

ಇವರು ಗಣಿತನಗರದ ಜ್ಞಾನಸುಧಾ ವಿದ್ಯಾಸಂಸ್ಥೆಯ ಹಿಂಬದಿಯಲ್ಲಿ ನೂತನವಾಗಿ ನಿರ್ಮಿಸುತ್ತಿದ್ದ ಕಟ್ಟಡದಲ್ಲಿ ಆ.4ರಂದು ಸೆಂಟ್ರಿಂಗ್ ಕೆಲಸ ಮಾಡುತ್ತಿ ರುವಾಗ ಆಯತಪ್ಪಿಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಆ.15ರಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News